ವಿಜಯಪುರ: 2028ರ ಚುನಾವಣೆ ಬಳಿಕ ನಾನೇ ಮುಖ್ಯಮಂತ್ರಿ ಆಗುತ್ತೇನೆಂದು ಜೆಜೆಪಿಯಿಂದ ಉಚ್ಚಾಟನೆಗೊಂಡಿರುವ ಶಾಸಕ ಬಸನಗೌಡಾ ಪಾಟೀಲ ಯತ್ನಾಳ ಹೇಳಿಕೊಂಡಿದ್ದಾರೆ.
ಮಾಧ್ಯಮಗಳೊಂದಿಗೆ ಮಾತನಾಡಿರುವ ಯತ್ನಾಳ್, ನಾನು ಯಾರ ಕೈ-ಕಾಲು ಹಿಡಿಯುವುದಿಲ್ಲ. ಬಿಜೆಪಿಗೆ ವಾಪಸ್ ಹೋಗೋದು ನನಗೆ ಗೊತ್ತಿದೆ. 2028ಕ್ಕೆ ಯಡಿಯೂರಪ್ಪ ಮಗ ವಿಜಯೇಂದ್ರನೇ ರಾಜ್ಯದ ಮುಖ್ಯಮಂತ್ರಿ ಆಗಬೇಕಾ? ನಾನು ಚಾಲೆಂಜ್ ಮಾಡುತ್ತೇನೆ, 2028ಕ್ಕೆ ನಾನೇ ಮುಖ್ಯಮಂತ್ರಿ ಆಗುತ್ತೇನೆ ಎಂದಿದ್ದಾರೆ.
ಬಿಜೆಪಿಯಿಂದ ಉಚ್ಚಾಟನೆಗೊಂಡಿರುವ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರು ಯಡಿಯೂರಪ್ಪ ಕುಟುಂಬದ ವಿರುದ್ದದ ವಾಗ್ದಾಳಿಯನ್ನು ಮುಂದುವರೆಸಿದ್ದಾರೆ. ತಮ್ಮ ಉಚ್ಛಾಟನೆಗೆ ಯಡಿಯೂರಪ್ಪ ನೇರ ಕಾರಣ ಎಂದು ಆರೋಪಿಸಿದ್ದಾರೆ.
ನಾನು ಕುಟುಂಬ ರಾಜಕಾರಣ ಹೋಗಲಾಡಿಸಲು ಯಡಿಯೂರಪ್ಪ ಹಾಗೂ ಅವರ ಪುತ್ರ ವಿಜಯೇಂದ್ರ ವಿರುದ್ಧ ಧ್ವನಿ ಎದ್ದಿದ್ದೇನೆ. ಆದರೆ ನನ್ನನ್ನೆ ಪಕ್ಷದಿಂದ ಹೊರಹಾಕಲಾಗಿದೆ ಎಂದು ಅಸಮಾಧಾನ ವ್ಯಕ್ತ ಪಡಿಸಿದ್ದಾರೆ.