ರಾಯಚೂರು: ಬೆಳ್ಳಂ ಬೆಳಗ್ಗೆ ನಡು ರಸ್ತೆಯಲ್ಲೇ ಚಾಕುವಿನಿಂದ ಇರಿದು ಯುವಕನೋರ್ವನನ್ನು ಬರ್ಬರವಾಗಿ ಕೊಲೆ ಮಾಡಿರುವ ಘಟನೆ ರಾಯಚೂರು ನಗರದ ಡಾ. ಜಾಕೀರ್ ಹುಸೇನ್ ವೃತ್ತದಲ್ಲಿ ಭಾನುವಾರ ನಡೆದಿದೆ.

ಜಹೀರಾಬಾದ್ನ ಬಡಾವಣೆಯ ಸಾದಿಕ್ (27) ಹತ್ಯೆಯಾದ ಯುವಕ. ಘಟನೆ ಸಂಬಂಧ ಓರ್ವ ಆರೋಪಿಯನ್ನು ವಶಕ್ಕೆ ಪಡೆಯಲಾಗಿದ್ದು, ಮತ್ತೋರ್ವ ಸ್ಥಳದಿಂದ ಪರಾರಿಯಾಗಿದ್ದಾನೆ ಎಂದು ತಿಳಿಸು ಬಂದಿದೆ.

ಕರೀಂ ಬಂಧಿತನಾದ ಆರೋಪಿ. ಬೆಳಗ್ಗೆ ನಾಲ್ಕು ಗಂಟೆಗೆ ಇಡ್ಲಿ ಬಂಡಿ ಇಡುವ ವಿಚಾರಕ್ಕೆ ಘಲಾಟೆ ನಡೆದಿದೆ. ಇಬ್ಬರ ನಡುವೆ ತೀವ್ರ ವಾಗ್ವಾದ ನಡೆದು ವಾಗ್ವಾದ ತಾರಕ್ಕೇರಿದೆ. ಆರೋಪಿಗಳು ಸಾದಿಕ್ ದೇಹಕ್ಕೆ ಚಾಕುವಿನಿಂದ ಮನಬಂದಂತೆ ಇರಿದು ಕೊಲೆ ಮಾಡಿದ್ದಾರೆ. ರಕ್ತದ ಮಡುವಿನಲ್ಲಿ ಬಿದ್ದಿದ್ದ ಸಾದಿಕ್ನನ್ನು ಆಸ್ಪತ್ರೆಗೆ ಸಾಗಿಸುತ್ತಿರುವಾಗ, ಮಾರ್ಗ ಮಧ್ಯೆ ಸಾವನ್ನಪ್ಪಿದ್ದಾನೆ ಎಂದು ತಿಳಿದು ಬಂದಿದೆ. ಸದ್ಯ ಹಳೇ ವೈಷಮ್ಯ ಹಿನ್ನೆಲೆಯಲ್ಲಿ ಹತ್ಯೆ ನಡೆದಿರುವ ಶಂಕೆ ಇದೆ ಎಂದು ಪೊಲೀಸ್ ಮೂಲಗಳಿಂದ ಮಾಹಿತಿ ಲಭ್ಯವಾಗಿದೆ.