ಚಿಕ್ಕೋಡಿ : ಕಾಂಗ್ರೆಸ್ ಯುವ ಘಟಕದ ರಾಜ್ಯ ಘಟಕದ ಪ್ರಧಾನ ಕಾರ್ಯದರ್ಶಿಯಾಗಿರುವ ರಾಹುಲ್ ಜಾರಕಿಹೊಳಿ ಅವರು ಲೋಕೋಪಯೋಗಿ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ ಹುಟ್ಟು ಹಬ್ಬದ ಪ್ರಯುಕ್ತ ಬೆಳಗಾವಿ ಕಿತ್ತೂರ ರಾಣಿ ಚನ್ನಮ್ಮಾ ಮೃಗಾಲಯದಲ್ಲಿರುವ “ಬೃಂಗಾ” ಎಂಬ ಹೆಸರಿನ ಹೆಣ್ಣು ಸಿಂಹವನ್ನು ಒಂದು ವರ್ಷದ ಅವಧಿಗೆ ದತ್ತು ಪಡೆದು ಮಾದರಿಯಾಗಿದ್ದಾರೆ.

ರಾಹುಲ್ ಜಾರಕಿಹೊಳಿ ಅವರು ತಮ್ಮ ತಂದೆಯ ಜನ್ಮ ದಿನದ ಪ್ರಯುಕ್ತ 2025 ಜೂ.1 ರಿಂದ 2026 ಜೂ.1ರ ವರೆಗೆ ಸಿಂಹವನ್ನು ದತ್ತು ಪಡೆದು ತಮ್ಮ ಪ್ರಾಣಿ ಪ್ರೀತಿ ತೋರಿದ್ದಾರೆ.