

ಕಾಗವಾಡ: ಕಾಂಗ್ರೆಸ್ ಪಕ್ಷದ ಶಾಸಕ ರಾಜು ಕಾಗೆ ಮತ್ತೊಮ್ಮೆ ಸರ್ಕಾರದ ವಿರುದ್ಧ ಅಸಮಾಧಾನ ಹೊರ ಹಾಕಿದ್ದಾರೆ.

ಕಾಗವಾಡ ಮತಕ್ಷೇತ್ರದ ಶಾಸಕ ರಾಜು ಕಾಗೆ ಸ್ವ ಪಕ್ಷದ ಸರಕಾರದ ಬಗ್ಗೆ ಬೇಸರ ಹೊರಹಾಕಿದ್ದಾರೆ. ಕಾಮಗಾರಿ ಟೆಂಡರ ಆಗಿ ಎರಡು ವರ್ಷ ಕಳೆದ ಬಳಿಕ ಅಪ್ರೂವಲ್ ಸಿಕ್ಕಿದೆ. ಪ್ರತಿ 8 ದಿನಕ್ಕೊಮ್ಮೆ ಮುಖ್ಯ ಇಂಜಿನಿಯರ್ ಕಚೇರಿಗೆ ಅಲೆದು ಸುಸ್ತಾಗಿ ಹೋಗಿದೆ ಎಂದು ಕಾಮಗಾರಿ ಪೂಜೆ ಕಾರ್ಯಕ್ರಮದ ಬಹಿರಂಗ ಸಭೆಯಲ್ಲಿಯೇ ಕೈ ಶಾಸಕ ಸ್ವಪಕ್ಷದ ವಿರುದ್ಧ ಅಸಮಾಧಾನ ಹೊರಹಾಕಿದ್ದಾರೆ.

ಸರಕಾರದ ವೈಫಲ್ಯಗಳು ಬಹಳಷ್ಟು ಇವೆ ಎಂದ ಕೈ ಶಾಸಕ 53 ಕೋಟಿ ರೂಪಾಯಿ ವೆಚ್ಚದ ಕಾಮಗಾರಿಗೆ ಗ್ರೀನ್ ಸಿಗ್ನಲ್ ನೀಡುವುದಕ್ಕೆ ಅಧಿಕಾರಿಗಳಿಂದ ವಿಳಂಬವಾಗಿದೆ ಎಂದು ಬೆಳಗಾವಿ ಜಿಲ್ಲೆಯ ಕಾಗವಾಡ ಮತಕ್ಷೇತ್ರದ ಸಿದ್ದೇವಾಡಿ ಗ್ರಾಮದಲ್ಲಿ ಕಾಗವಾಡ ಶಾಸಕ ರಾಜು ಕಾಗೆ ಅಸಮಾಧಾನ ಹೊರಹಾಕಿದ್ದಾರೆ.

