ಅಥಣಿ: ಶಾಸಕ ಲಕ್ಷ್ಮಣ ಸವದಿ ತೆರಳುತ್ತಿದ್ದ ಕಾರು ಅಪಘಾತಕ್ಕೀಡಾಗಿರುವ ಘಟನೆಗಳು ಸೋಮವಾರ ಸಾಯಂಕಾಲ ನಡೆದಿದೆ.

ಬೆಳಗಾವಿ ಜಿಲ್ಲೆ ಅಥಣಿಯಿಂದ ಗೋಕಾಕ್ ಮಾರ್ಗವಾಗಿ ಬೆಂಗಳೂರಿಗೆ ಹೋಗುತ್ತಿದ್ದ ಶಾಸಕ ಲಕ್ಷ್ಮಣ ಸವದಿ ಕಾರಿಗೆ ದರೂರ ಗ್ರಾಮದ ಬಳಿ ಗೂಡ್ಸ್ ವಾಹನ ಡಿಕ್ಕಿಯಾಗಿ ಅಪಘಾತ ಸಂಭವಿಸಿದೆ. ಅದೃಷ್ಟವಶಾತ್ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ.

ಇಂದು ಸಾಯಂಕಾಲ 4 ಗಂಟೆ ಸುಮಾರಿಗೆ ಈ ಅಪಘಾತ ಸಂಭವಿಸಿದ್ದು, ಈ ಅಪಘಾತದಲ್ಲಿ ಗೂಡ್ಸ್ ವಾಹನ ಚಾಲಕನ ನಿರ್ಲಕ್ಷ್ಯವೆಂದು ಮೇಲ್ನೋಟಕ್ಕೆ ಕಂಡುಬಂದಿದೆ.

ಅಪಘಾತದ ಬಳಿಕ ಶಾಸಕ ಲಕ್ಷ್ಮಣ ಸವದಿ ಕೆಳಗಿಳಿದು ಗೂಡ್ಡ ವಾಹನ ಚಾಲಕನ ಆರೋಗ್ಯ ವಿಚಾರಿಸಿದ್ದಾರೆ. ಅಪಘಾತದಲ್ಲಿ ಎರಡು ವಾಹನ ಸವಾರರಿಗೆ ಯಾವುದೇ ಗಾಯಗಳಾಗಿಲ್ಲ ಅಥಣಿ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.