ಬೆಳಗಾವಿ: ಕಾಂಗ್ರೆಸ್ ಪಕ್ಷದ ಯುವ ಮುಖಂಡ ಹಾಗೂ ಉದ್ಯಮಿ ಮಲ್ಲಿಕಾರ್ಜುನ ವಿರುಪಾಕ್ಷಿ ಪತ್ತಾರ ಅವರು ಕರ್ನಾಟಕ ರಾಜ್ಯ ವಿಶ್ವಕರ್ಮ ಸಮಾಜ (ರಿ) ಬೆಂಗಳೂರು ಇದರ ಸಹ ಕಾರ್ಯದರ್ಶಿಯಾಗಿ ಮತ್ತು ರಾಜ್ಯ ಕಾರ್ಯಕಾರಿಣಿ ಸದಸ್ಯರಾಗಿ ಬೆಳಗಾವಿ ಜಿಲ್ಲೆಯಿಂದ ಆಯ್ಕೆ ಆಗಿದ್ದಾರೆ.

ಬೆಂಗಳೂರಿನಲ್ಲಿ ಇತ್ತಿಚೆಗೆ ನಡೆದ ಕಾರ್ಯಕಾರಿಣಿ ಸಭೆಯಲ್ಲಿ ಚುನಾವಣಾದಿಕಾರಿಯಾದ ಎಸ್ ವಿ ತಿರುಮಲೆ ಅವರು ಮಲ್ಲಿಕಾರ್ಜುನ ಪತ್ತಾರ ಅವರ ಆಯ್ಕೆಯನ್ನು ಘೋಷಣೆ ಮಾಡಿದರು‌.

ಆಯ್ಕೆ ಪ್ರಕ್ರಿಯೆ ಬಳಿಕ ಬೆಳಗಾವಿ ಜಿಲ್ಲೆಯ ವಿಶ್ವಕರ್ಮ ಸಮಾಜದ ಸಮಸ್ಯೆಗಳನ್ನ ರಾಜ್ಯ ಮಟ್ಟದಲ್ಲಿ ಪರಿಹರಿಸುವ ನಿಟ್ಟಿನಲ್ಲಿ ಪ್ರಾಮಾಣಿಕ ಪ್ರಯತ್ನ‌ ಮಾಡುವದರ ಜೊತೆಗೆ ಸಮಾಜದ ಕಡು ಬಡವರ ಜೊತೆಗೆ ಸದಾ ನಿಲ್ಲುತ್ತೇನೆ ಎಂದು ಮಲ್ಲಿಕಾರ್ಜುನ ಪತ್ತಾರ ಭರವಸೆ ನೀಡಿದ್ದಾರೆ.

ಮಲ್ಲಿಕಾರ್ಜುವ ಅವರ ಆಯ್ಕೆಗೆ ಸಚಿವ ಸತೀಶ ಜಾರಕಿಹೊಳಿ, ಕಾಂಗ್ರೆಸ್ ಪಕ್ಷದ ಮುಖಂಡರಾದ ಪಾಂಡು ಮಣ್ಣಿಕೇರಿ, ಕಿರಣ ರಜಪೂತ, ಬಸವೇಶ ಪಟ್ಟಣಶೆಟ್ಟಿ ಅಭಿನಂದನೆ ಸಲ್ಲಿಸಿದ್ದಾರೆ.