ಚಿಕ್ಕೋಡಿ: ಜೊಲ್ಲೆ ಗ್ರೂಪ್ ನ ಅಂಗ ಸಂಸ್ಥೆಯಾದ ಶ್ರೀ ಬೀರೇಶ್ವರ ಕೋ ಆಫ್ ಕ್ರೆಡಿಟ ಸೊಸಾಯಿಟಿ ಲಿ, ಯಕ್ಸಂಬಾ (ಬಹುರಾಜ್ಯ) 45.35 ಕೋಟಿ ನಿವ್ವಳ ಲಾಭ ಗಳಿಸಿದೆ.
ನಿವ್ವಳ ಲಾಭದ ಕುರಿತು ಆಯೋಜಿಸಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತಾನಾಡಿದ ಮಾಜಿ ಸಂಸದ ಹಾಗೂ ಸಂಸ್ಥಾಪಕ‌ ಅಧ್ಯಕ್ಷ ಅಣ್ಣಾಸಾಹೇಬ ಜೊಲ್ಲೆ
ಬೀರೇಶ್ವರ ಸಂಸ್ಥೆಯು ವರ್ಷದಿಂದ ವರ್ಷಕ್ಕೆ ಸದೃಡವಾಗಿ ಬೆಳೆಯುತ್ತಿದೆ. ಈ ಸಂಸ್ಥೆಯು 4338 ಕೋಟಿ ಠೇವು ಸಂಗ್ರಹಿಸುವ ಮೂಲಕ ಒಂದು ಮೈಲುಗಲ್ಲು ಸಾಧಿಸಿದೆ.

ಸಂಸ್ಥೆಯು ಕರ್ನಾಟಕ, ಮಹಾರಾಷ್ಟ ಹಾಗೂ ಗೋವಾ ರಾಜ್ಯದ ವಿವಿದೆಡೆ 226 ಶಾಖೆಗಳನ್ನು ತೆರೆಯುವ ಮೂಲಕ ತನ್ನ ಕಾರ್ಯಕ್ಷೇತ್ರವನ್ನು ವ್ಯಾಪಿಸಿ, ಸನ್ 2024-25 ನೇ ಸಾಲಿನ ಆರ್ಥಿಕ ವರ್ಷದಲ್ಲಿ 45 ಕೋಟಿ 35 ಲಕ್ಷ ರೂಗಳಷ್ಟು ಲಾಭಗಳಿಸಿದೆ. ಇದಕ್ಕೆ ಸಹಕರಿಸಿದ ನಮ್ಮ ಸಂಸ್ಥೆಯ ಅಧ್ಯಕ್ಷರು, ಉಪಾಧ್ಯಕ್ಷರು, ನಿರ್ದೇಶಕ ಮಂಡಳಿ ಸದಸ್ಯರು, ಶಾಖಾ ಸಲಹಾ ಸಮಿತಿ ಸದಸ್ಯರು, ಹಾಗೂ ಸಂಸ್ಥೆಯ ಪದಾಧಿಕಾರಿಗಳು, ಹಾಗೂ ಸಿಬ್ಬಂದಿಗಳಿಗೆ, ಸದಸ್ಯರಿಗೆ ತುಂಬು ಹೃದಯದ ಧನ್ಯವಾದಗಳನ್ನೂ ಸಲ್ಲಿಸುತ್ತೇನೆ ಎಂದರು.

ಈ ಸಂದರ್ಭದಲ್ಲಿ ಬೀರೇಶ್ವರ ಸಂಸ್ಥೆಯ ಅಧ್ಯಕ್ಷರಾದ ಅಪ್ಪಾಸಾಹೇಬ ಜೊಲ್ಲೆ, ಉಪಾಧ್ಯಕ್ಷರಾದ ಆನಂದ ಪಾಟೀಲ, ನಿರ್ದೇಶಕ ಮಂಡಳಿ ಸದಸ್ಯರು ಹಾಗೂ ಸಂಸ್ಥೆಯ ಪದಾಧಿಕಾರಿಗಳು ಉಪಸ್ಥಿತರಿದ್ದರು.