ಗೋಕಾಕ: ಪಿಎಸ್‌ಐ ಅವಾಚ್ಯ ಶಬ್ದಗಳಿಂದ ನಿಂದನೆಗೆ ಮನನೊಂದ ವ್ಯಕ್ತಿಯೊಬ್ಬ ಮೈಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿದ ಘಟನೆ ಗೋಕಾಕಿನ ಬಸವೇಶ್ವರ ವೃತ್ತದಲ್ಲಿ ನಡೆದಿದೆ.

ಹೌದು..ಗೋಕಾಕ ನಗರದ ಆದಿಜಾಂಬವ ನಗರ ನಿವಾಸಿಯಾಗಿರುವ ವಿಶಾಲ ಮೇತ್ರಿ ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿ. ಗೋಕಾಕ ಪೊಲೀಸ್‌ ಠಾಣೆಯ ಪಿಎಸ್‌ಐ ವಾಲಿಕರ ಎಂಬುವರು ಅವಾಚ್ಯ ಶಬ್ದಗಳಿಂದ ನಿಂದನೆ ಮಾಡಿದ್ದಾರೆಂದು ಆರೋಪಿಸಿ ವಿಶಾಲ್ ಪೆಟ್ರೋಲ್ ತೆಗೆದುಕೊಂಡು ಬಂದು ಮೈಮೇಲೆ ಸುರಿದು ಬೆಂಕಿ ಹಚ್ಚಿಕೊಂಡಿದ್ದಾನೆ. ನಿನ್ನೆ ವಿಶಾಲ ಮೇತ್ರಿ ಹಾಗೂ ಅವರ ಸಂಬಂಧಿಕರ ಜೊತೆ ಗಲಾಟೆ ನಡೆದಿತ್ತು. ಪಿಎಸ್ ಐ ಈ ಗಲಾಟೆ ವಿಚಾರಣೆ ನಡೆಸಲು ವಿಶಾಲ ಅವರ ಮನೆ ಬಂದಾಗ ಅವಾಚ್ಯ ಶಬ್ದಗಳಿಂದ ನಿಂದನೆ ಮಾಡಿದ್ದಾರೆ ಎಂದು ಆರೋಪಿಸಿರುವ ವಿಶಾಲ್ ಮೈಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದಾನೆ ಎಂದು ತಿಳಿದು ಬಂದಿದೆ.