ಬೆಳಗಾವಿ: ಕ್ಯಾಬೇಜ್ ದರ ಕುಸಿತದಿಂದ ಕಂಗಾಲಾರುವ ರೈತರು ಬೆಳಗಾವಿ ಜಿಲ್ಲಾಧಿಕಾರಿಗಳ ಕಚೇರಿ ಎದುರು ತಾವು ಬೆಳೆದ ಕ್ಯಾಬೇಜ್ ಅನ್ನು ರಸ್ತೆಯಲ್ಲೇ ಎಸೆದು ಆಕ್ರೋಶ ವ್ಯಕ್ತಪಡಿಸಿದರು.
ನಾವು ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ್ದೇವೆ. ನಮಗೆ ಆಗಿರುವ ಹಾನಿಗೆ ಸರ್ಕಾರ ಸೂಕ್ತ ಪರಿಹಾರ ಒದಗಿಸಬೇಕು’ ಎಂದು ಒತ್ತಾಯಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರುಸೇನೆ ನೇತೃತ್ವದಲ್ಲಿ ರೈತರು ಜಿಲ್ಲಾಧಿಕಾರಿ ಕಚೇರಿ ಎದುರು ಸೋಮವಾರ ಪ್ರತಿಭಟನೆ ನಡೆಸಿದರು.
‘ಮೂರ್ನಾಲ್ಕು ತಿಂಗಳಿಂದ ಕ್ಯಾಬೇಜ್, ಮೂಲಂಗಿ ಮತ್ತಿತರ ತರಕಾರಿಗಳ ದರ ಕುಸಿದಿದೆ. ಮಾರಾಟಕ್ಕಾಗಿ ಮಾರುಕಟ್ಟೆಗೆ ತಂದರೆ, ವಾಹನದ ಬಾಡಿಗೆಯೂ ಸಿಗುತ್ತಿಲ್ಲ. ಹಾಗಾಗಿ ಬೆಳೆ ಹೊಲದಲ್ಲೇ ಕೊಳೆಯುತ್ತಿದೆ. ಇದರಿಂದ ರೈತರು ಆರ್ಥಿಕವಾಗಿ ಕುಗ್ಗುತ್ತಿದ್ದಾರೆ . ಹಾಗಾಗಿ ಎಲ್ಲ ತರಕಾರಿಗಳಿಗೆ ಸರಕಾರ ದರ ನಿಗದಿಪಡಿಸಬೇಕೆಂದು ಒತ್ತಾಯಿಸಿದರು.