ಬೆಳಗಾವಿ:ಬೈಲಹೊಂಗಲ ತಾಲ್ಲೂಕಿನ ನವವಿವಾಹಿತೆ ಕಿಟನಾಶಯ ಮಾತ್ರೆ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿ ಚಿಕಿತ್ಸೆ ಫಲಿಸದೆ ಬೆಳಗಾವಿಯ ಬಿಮ್ಸ್ ಆಸ್ಪತ್ರೆಯಲ್ಲಿ ಮೃತಪಟ್ಟ ಘಟನೆ ಶುಕ್ರವಾರ ನಡೆದಿದೆ.
ಬೆಳಗಾವಿ ಜಿಲ್ಲೆ ಬೈಲಹೊಂಗಲ ತಾಲೂಕಿನ ಇಂಚಲ ಗ್ರಾಮದ
ಲಕ್ಷ್ಮೀ ಮಂಜುನಾಥ ಹೂಗಾರ (22) ಮೃತ ನವವಿವಾಹಿತೆ. ಕಳೆದ ಡಿಸೆಂಬರ್ 7 ರಂದು ತಮ್ಮ ಮಾವನ ಮಗ ಮಂಜುನಾಥ ಎಂಬುವರ ಜೊತೆಗೆ ಲಕ್ಷ್ಮೀ ಮದುವೆಯಾಗಿದ್ದಳು. ಮದುವೆಯಾಗಿ ಐದು ತಿಂಗಳ ಒಳಗೆ ನವವಿವಾಹಿತೆ ಆತ್ಮಹತ್ಯೆಗೆ ಶರಣಾಗಿರುವುದು ಹಲವು ಅನುಮಾನಗಳಿಗೆ ಎಡೆ ಮಾಡಿ ಕೊಟ್ಟಿದೆ.
ಕೀಟನಾಶಕ ಮಾತ್ರೆ ನುಂಗಿ ಅಸ್ವಸ್ಥಗೊಂಡಿದ್ದ ಲಕ್ಷ್ಮೀಯನ್ನು ಮೊದಲು ಕುಟುಂಬಸ್ಥರು ಬೈಲಹೊಂಗಲ ಸರಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಿದ್ದರು. ಬಳಿಕ ಅಲ್ಲಿನ ವೈದ್ಯರ ಸಲಹೆ ಮೇರೆಗೆ ಆಕೆಯನ್ನು ಹೆಚ್ಚಿನ ಚಿಕಿತ್ಸೆಗೆ ಬೆಳಗಾವಿಯ ಬಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಬೆಳಗಾವಿಯ ಬೀಮ್ಸ್ ಆಸ್ಪತ್ರೆಯಲ್ಲಿ ಲಕ್ಷ್ಮೀ ಕೊನೆಯುಸಿರೆಳೆದಿದ್ದಾಳೆ.
ಬೈಲಹೊಂಗಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.