ಚಿಕ್ಕೋಡಿ: ತಾಯಿ ಮಗನನ್ನು ಕೊಲೆ ಮಾಡಿ ದುಷ್ಕರ್ಮಿಗಳು ಪರಾರಿಯಾಗಿರುವ ಘಟನೆ ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಕೊಡಗಾನೂರು ಗ್ರಾಮದಲ್ಲಿ ನಡೆದಿದೆ.
ಜೋಡಿ ಕೊಲೆಗೆ ಸ್ಥಳೀಯರು ಬೆಚ್ಚಿಬಿದ್ದಿದ್ದಾರೆ.
ಚಂದ್ರವ್ವ ಅಪ್ಪಾರಾಯ ಇಚೇರಿ (62).
ವಿಠ್ಠಲ್ ಅಪ್ಪರಾಯ ಇಚೇರಿ (42) ಮೃತ ದುರ್ದೈವಿಗಳು.
ತಾಯಿ ಮಗನನ್ನು ಕೊಲೆ ಮಾಡಿ ಕಬ್ಬಿನ ಗದ್ದೆಯಲ್ಲಿ ಎಸೆದು ದುಷ್ಕರ್ಮಿಗಳು ಪರಾರಿಯಾಗಿದ್ದಾರೆ.
ಸ್ಥಳಕ್ಕೆ ಅಥಣಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು ಅಥಣಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.