ಬೆಳಗಾವಿ : ಬೆಳಗಾವಿಯಲ್ಲಿ ಪೊಲೀಸ್ ಅಧಿಕಾರಿ ಮೇಲೆ ಸಿಎಂ ಸಿದ್ದರಾಮಯ್ಯ ಗರಂ ಆಗಿ ಕೈ ಎತ್ತಿ ಹೊಡೆಯಲು ಮುಂದಾದ ಪ್ರಸಂಗ ನಡೆಯಿತು.

ಅಗತ್ಯ ವಸ್ತುಗಳ ಬೆಲೆ ಏರಿಕೆಯನ್ನು ಖಂಡಿಸಿ ಕೇಂದ್ರ ಬಿಜೆಪಿ ಸರ್ಕಾರದ ವಿರುದ್ಧ ಬೆಳಗಾವಿಯಲ್ಲಿ ನಡೆದ ಬೃಹತ್ ಪ್ರತಿಭಟನಾ ಸಮಾವೇಶದಲ್ಲಿ ಸಿಎಂ ಸಿದ್ದರಾಮಯ್ಯ ಅವರು ದಾರವಾಡದ ಹೆಚ್ಚುವರಿ ಎಸ್ಪಿ ನಾರಾಯಣ ಬರಮಣಿ ವಿರುದ್ದ ಗರಂ ಆದರು.

ಬಿಜೆಪಿಯ ಮಹಿಳಾ ಕಾರ್ಯಕರ್ತರು ಕಪ್ಪು ಪಟ್ಟಿ ಪ್ರದರ್ಶಿಸಿ, ವೇದಿಕೆಯತ್ತ ಮುನ್ನುಗ್ಗಲು ಯತ್ನಿಸಿದ್ದಾರೆ. ಈ ವೇಳೆ ಕೆಲ ಕಾಲ ಭಾಷಣ ನಿಲ್ಲಿಸಿದ ಸಿಎಂ ಸಿದ್ದರಾಮಯ್ಯ, ಪೊಲೀಸರು ಏನು ಮಾಡುತ್ತೀದ್ದೀರಾ? ಯಾರಯ್ಯ ಎಸ್ಪಿ ಎಂದು ಸಿಎಂ ಸಿಟ್ಟಿನಲ್ಲಿ ಪೊಲೀಸ್ ಅಧಿಕಾರಿಯನ್ನ ಹೊಡೆಯಲು ಕೈ ಎತ್ತಿದ್ದಾರೆ. ಸಮಾವೇಶಕ್ಕೆ ಬಂದು ಅಡ್ಡಿ ಪಡಿಸಲು ಯತ್ನಿಸಿದರೂ ಸುಮ್ಮನೇ ನಿಂತಿರುವುದನ್ನು ಕಂಡು ಸಿಎಂ ಕ್ಷಣ ಕಾಲ ಕೋಪಗೊಂಡರು. ಅಲ್ಲಿ ಏನು ನಡೆಯುತ್ತಿದೆ ಗೊತ್ತಾಗಲ್ವಾ ಎಂದು ಸಿಎಂ ಗದರಿದರು.