ಹುಕ್ಕೇರಿ : ಕಳ್ಳತನ ಪ್ರಕರಣದಲ್ಲಿ ಜಾಮಿನು ಪಡೆದು ಪರಾರಿಯಾಗಿ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಬೆಳಗಾವಿ ಜಿಲ್ಲೆ ಹುಕ್ಕೇರಿ ತಾಲೂಕಿನ ಸಂಕೇಶ್ವರ ಪೊಲೀಸರು 20 ವರ್ಷದ ಬಳಿಕ ಪತ್ತೆ ಮಾಡಿದ್ದಾರೆ.
ಮಹಾರಾಷ್ಟ್ರ ರಾಜ್ಯದ ಕೊಲ್ಹಾಪುರ ಜಿಲ್ಲೆಯ ರಾಜು ಪ್ರತಾಪರಾವ್ ಚಂದವಾನಿ (65) ಎಂಬಾತನು 2005 ರಲ್ಲಿ ಸಿಲಿಂಡರ್ ಕಳ್ಳತನ ಪ್ರಕರಣದಲ್ಲಿ ಆರೋಪಿಯಾಗಿದ್ದ ಬಳಿಕ ನ್ಯಾಯಾಲಯದಿಂದ ಜಾಮೀನು ಪಡೆದುಕೊಂಡಿದ್ದ ರಾಜು ಮರಳಿ ನ್ಯಾಯಾಲಯದ ವಿಚಾರಣೆಗೆ ಹಾಜರಾಗದೆ ಕಳೆದ 20 ವರ್ಷಗಳಿಂದ ತಲೆಮರಿಸಿಕೊಂಡಿದ್ದನು.
ಸದ್ಯ ಆರೋಪಿಯನ್ನ ಇಂದು ಸಂಕೇಶ್ವರ ಠಾಣೆಯ ಪೊಲೀಸರು ಕೊಲ್ಲಾಪುರದ ನ್ಯೂ ಶಾಹು ಪುರಿಯಲ್ಲಿ ಪತ್ತೆ ಹಚ್ಚಿ ಠಾಣೆಗೆ ಕರೆದುಕೊಂಡು ಬಂದಿದ್ದು, ನಂತರ ಆರೋಪಿತನಿಗೆ ಮಾನ್ಯ ಸಂಕೇಶ್ವರ್ ಜೆ ಎಂ ಎಫ್ ಸಿ ನ್ಯಾಯಾಯದ ಮುಂದೆ ಹಾಜರುಪಡಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.